ಕಾರೆಕೊಪ್ಪ ಹಾಗೂ ಎಲೆತೋಟದ ಹಳ್ಳಿ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿ.ಪಿ.ಯೋಗೀಶ್ವರ್ ಗುದ್ದಲಿ ಪೂಜೆ ನೆರವೇರಿಸಿದರು. ಭಾನುವಾರ ಕಾರೆಕೊಪ್ಪ ಗ್ರಾಮದಲ್ಲಿ ಸಿಸಿ ರಸ್ತೆ, ಪೈಪ್ ಲೈನ್ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದರು. ಈ ವೇಳೆ ಮಾತನಾಡಿದ ಯೋಗೀಶ್ವರ್ ಈಗಾಗಲೇ ಸಾಕಷ್ಟು ಅನುದಾನ ತಂದು ತಾಲ್ಲೂಕಿನ ಗ್ರಾಮಗಳನ್ನ ಅಭಿವೃದ್ಧಿ ಪಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನ ತಂದು ಅಭಿವೃದ್ಧಿ ಮಾಡಲಾಗುತ್ತದೆ ಎಂದರು.