ಭಾರತ ಪ್ರಜಾಸತ್ತಾತ್ಮಕ ಯುವ ಜನ ಫೆಡರೇಶನ್ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಉದ್ಯೋಗ ಸೃಷ್ಟಿಸಿ, ಸ್ಥಳೀಯರಿಗೆ ಆದ್ಯತೆ ನೀಡಬೇಕೆಂದು ಸರಕಾರಕ್ಕೆ ಒತ್ತಾಯಿಸಿ ಸೆಪ್ಟೆಂಬರ್ 7 ರಿಂದ 9 ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಯುವ ಜನ ಜಾಥ ನಡೆಯಲಿದೆ ಎಂದು ಡಿ ವೈ ಎಫ್ ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಬಿ ಕೆ ಇಮ್ತಿಯಾಜ್ ಹೇಳಿದರು.ಅವರು ವುಡ್ ಲ್ಯಾಂಡ್ಸ್ ಹೋಟೆಲ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.