ಹುಬ್ಬಳ್ಳಿ: ಭಾರತೀಯ ಜನತಾ ಪಾರ್ಟಿ ಹುಬ್ಬಳ್ಳಿ-ಧಾರವಾಡ ಮಹಾನಗರದ ವತಿಯಿಂದ ಶ್ರೀ ಪವಿತ್ರ ಧರ್ಮಸ್ಥಳದ ಮೇಲೆ ನಡೆಯುತ್ತಿರುವ ಅಪಪ್ರಚಾರ ವಿರುದ್ಧ ಧರ್ಮದ ಉಳಿವಿಗಾಗಿ "ಧರ್ಮ ಯುದ್ದ" ಪ್ರತಿಭಟನೆಯ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ . ಇಂದು ಸಂಜೆ 4 ಗಂಟೆಗೆ ಹುಬ್ಬಳ್ಳಿಯ ಮೂರುಸಾವಿರ ಮಠದ ಮೈದಾನದಿಂದ ತಹಸಿಲ್ದಾರ್ ಕಚೇರಿ ವರೆಗೂ ಜರುಗಲಿದೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು.