Download Now Banner

This browser does not support the video element.

ಭಟ್ಕಳ: ಅರಣ್ಯ ಪ್ರದೇಶದಲ್ಲಿ ಜಾನುವಾರು ವಧೆ ಮಾಡಿ ಎಸೆದಿದ್ದ ಇಬ್ಬರು ಆರೋಪಿಗಳ ಬಂಧನ

Bhatkal, Uttara Kannada | Sep 18, 2025
ಭಟ್ಕಳ: ನಗರದ ಮುಗ್ದುಮ ಕಾಲೋನಿ ಗುಡ್ಡಪ್ರದೇಶದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಿ, ಚರ್ಮ-ಎಲುಬು ಸೇರಿದಂತೆ ಬಿಡಿಭಾಗಗಳನ್ನು ಅರಣ್ಯ ಪ್ರದೇಶದಲ್ಲಿ ಬಿಸಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ನಗರ ಪೊಲೀಸರು ಇಬ್ಬರು ಆರೋಪಿ ಗಳನ್ನು ಬಂಧಿಸಿದ್ದಾರೆ. ಉಪ ವಲಯ ಅರಣ್ಯಾಧಿಕಾರಿ ಮಾರುತಿ ಸೊರಗಾಂವಿ ನೀಡಿದ ದೂರಿನ ಮೇರೆಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಡಿವೈಎಸ್ಪಿ ಮಹೇಶ್ ಎಂ ಕೆ ಮಾರ್ಗದರ್ಶನದಲ್ಲಿ ಪಿಐ ದಿವಾಕರ ಪಿ ಎಮ್ ನೇತೃತ್ವದ ತಂಡವು ಆರೋಪಿಗಳಾದ ಮುಗ್ಗುಂ ಕಾಲೋನಿ ನಿವಾಸಿ ಮೊಹಮ್ಮದ್ ಸಮಾನ್ ಹಾಗೂ ಚೌತನಿಯ ಮೊಹಮ್ಮದ್ ರಾಹೀನ್ ಎಂಬವರನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ವಾಹನವನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.
Read More News
T & CPrivacy PolicyContact Us