ತ್ಯಾಜ್ಯ ವಿಲೇವಾರಿ ವಿಷಯದಲ್ಲಿ ತಾಲೂಕಿನ ಮಾಣಿಕ್ ನಗರ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ದಿವ್ಯ ನಿರ್ಲಕ್ಷ ತಾಳುತ್ತಿರುವ ಕಾರಣ ಪ್ರಮುಖ ಸ್ಥಳಗಳಲ್ಲಿ ಸಂಗ್ರಗೊಂಡ ತ್ಯಾಜ್ಯದಿಂದ ಸಾರ್ವಜನಿಕರು ತೀವ್ರ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಈ ಕುರಿತು ಸದಸ್ಯ ಪ್ರಭು ಅವರು ಸೋಮವಾರ ಮಧ್ಯಾಹ್ನ 1ಕ್ಕೆ ಬೇಸರ ವ್ಯಕ್ತಪಡಿಸಿದರು.