ನನಗೆ ಇಬ್ಬಿಬ್ಬರು ಮೂರು ಮೂರು ಜನ ಹೆಂಡ್ತಿರಿಲ್ಲ. ನಾನು ಯಾರ ಜೊತೆನೂ ಸಂಬಂಧ ಇಟ್ಟುಕೊಂಡು ಹೈಟೆಕ್ 5 ಸ್ಟಾರ್ ಹೋಟೆಲ್ ನಲ್ಲಿ ಕುಳಿತುಕೊಂಡಿಲ್ಲ. ನಾನು ಕ್ಷೇತ್ರದಲ್ಲೇ ಇದ್ದಿನಿ ಪ್ರತಿನಿತ್ಯ ಜನ ಸೇವೆ ಮಾಡುತ್ತಾ ಇದ್ದಿನಿ. ನಾನೇಲ್ಲೂ ಓಡಿ ಹೋಗಿಲ್ಲ ಎಂದು ಶಾಸಕ ಕೆ.ಎಂ.ಉದಯ್ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಪರೋಕ್ಷವಾಗಿ ಕಿಡಿಕಾರಿದರು. ಚಿತ್ರದುರ್ಗದ ಶಾಸಕ ವೀರೇಂದ್ರಅವರ ಮನೆ, ಕಛೇರಿ ಮೇಲೆ ಕೆಲ ದಿನಗಳ ಹಿಂದೆ ಇಡಿ ದಾಳಿ ಮಾಡಿ ಸಾವಿರಾರು ಕೋಟಿ ಆಸ್ತಿ ಪಾಸ್ತಿ ಪತ್ತೆ ಮಾಡಿ ಪಪ್ಪಿ ಅವರನ್ನು ಇಡಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಈ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಶಾಸಕ ಕೆ.ಎಂ.ಉದಯ್ ವೀರೇಂದ್ರ ಪಪ್ಪಿ ಅವರ ಮೇಲೆ ಇಡಿ ದಾಳಿ ನಡೆದಾಗಿನಿಂದ ಉದಯ್ ಕ್ಷೇತ್ರದಲ್ಲಿಲ್ಲ ಎಂಬ ಮಾಹಿತಿ ಹರಡಿತ್ತು.