ಬಾಗಲಕೋಟ ಜಿಲ್ಲೆಯ ಹುನಗುಂದ ಪಟ್ಟಣದಲ್ಲಿನ ಬ್ಯಾಂಕ್ಗಳಿಗೆ ಪೋಲಿಸರು ಸೆ.೨೬ ಮಂಗಳವಾರ ಮಧ್ಯಾಹ್ನ ೨ ಗಂಟೆಗೆ ಭೇಟಿ ನೀಡಿದರು. ಭೇಟಿ ನೀಡಿ ಮಾತನಾಡಿದ ಅವರು ಮುಂಜಾಗೃತಾ ಕ್ರಮವಾಗಿ ಬ್ಯಾಂಕ್ ಆವರಣದಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸುವಂತೆ ಹಾಗೂ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಪರಿಶೀಲಿಸುವಂತೆ, ಬ್ಯಾಂಕ್ ಬಾಗಿಲು ಹಾಗೂ ಲಾಕರ್ಗಳಿಗೆ ಅಲಾರಂ ಸಿಸ್ಟಂ ಅಳವಡಿಸುವಂತೆ, ಹೆಚ್ಚಿನ ಮೊತ್ತದ ನಗದು ಸಾಗಣೆ ವೇಳೆ ಕಡ್ಡಾಯವಾಗಿ ಭದ್ರತಾ ಸಿಬ್ಬಂದಿ ಇರುವಂತೆ, ಸಂಶಯಾಸ್ಪದ ವ್ಯಕ್ತಿಗಳ ಚಟುವಟಿಕೆ ಕಂಡುಬಂದರೆ ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸೂಚಿಸಿದರು.