ದಾಂಡೇಲಿ : ನಗರದ ಹಳೆ ನಗರ ಸಭೆಯ ಮೈದಾನದಲ್ಲಿ ನೂತನ ರಂಗಮಂದಿರ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಆರ್.ವಿ.ದೇಶಪಾಂಡೆಯವರು ಇಂದು ಗುರುವಾರ ಬೆಳಿಗ್ಗೆ 11:00 ಗಂಟೆ ಸುಮಾರಿಗೆ ಚಾಲನೆಯನ್ನು ನೀಡಿದರು. ನೂತನ ರಂಗಮಂದಿರ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳು ಗುಣಮಟ್ಟದಲ್ಲಿ ನಡೆಯಬೇಕೆಂದು ಈ ಸಂದರ್ಭದಲ್ಲಿ ದೇಶಪಾಂಡೆಯವರು ಕರೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷ ಅಷ್ಪಾಕ್ ಶೇಖ, ಉಪಾಧ್ಯಕ್ಷೆ ಶಿಲ್ಪಾ ಕೋಡೆ, ಸ್ಥಾಯಿ ಸಮಿತಿ ಅಧ್ಯಕ್ಷೆ ಸುಧಾ ರಾಮಲಿಂಗ ಜಾಧವ, ತಹಶೀಲ್ದಾರ್ ಶೈಲೇಶ ಪರಮಾನಂದ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಟಿ.ಸಿ.ಹಾದಿಮನಿ ಉಪಸ್ಥಿತರಿದ್ದರು.