ಯಲ್ಲಾಪುರ: ಲಕ್ಷ್ಮೇಶ್ವರ: ಅರಬೈಲ್ ಘಟ್ಟದಲ್ಲಿ ಹೊತ್ತುರಿದ ಕಾರು,ಪ್ರಯಾಣಿಕರು ಅಪಾಯದಿಂದ ಪಾರು
ಯಲ್ಲಾಪುರ: ತಾಲೂಕಿನ ಅರಬೈಲ್ ಘಟ್ಟದಲ್ಲಿಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟ ಹೋದ ಘಟನೆ ಸಂಭವಿಸಿದೆ.ಕಾರಲ್ಲಿ ಇದ್ದವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದರು. ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.