ಬೆಂಗಳೂರು ಉತ್ತರ: ಅರಮನೆ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ, ಏನೆಲ್ಲ ಚರ್ಚೆ ಮಾಡಿದ್ರು!
ಅಧಿವೇಶನದ ಹಿನ್ನೆಲೆಯಲ್ಲಿ ಆಗಸ್ಟ್ 12ರಂದು ಸಂಜೆ 6 ಗಂಟೆಗೆ ನಗರದ ಅರಮನೆ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ಅಧಿವೇಶನದಲ್ಲಿ ಸರ್ಕಾರದ ಸಾಧನೆಗಳನ್ನ ಸಮರ್ಥವಾಗಿ ಮಂಡಿಸುವಂತೆ ಹಾಗೂ ಪ್ರತಿಪಕ್ಷದ ನಾಯಕರುಗಳ ಆರೋಪಗಳಿಗೆ ಪ್ರತಿಯಾಗಿ ದಾಖಲೆ ಹಾಗೂ ಅಂಕಿ ಅಂಶಗಳ ಸಮೇತ ಸಮರ್ಥವಾಗಿ ಪ್ರಸ್ತಾಪಿಸಿ ಉತ್ತರ ನೀಡುವಂತೆ ಶಾಸಕರು ಹಾಗೂ ಮಂತ್ರಿಗಳಿಗೆ ಸೂಚಿಸಿದರು.