ಹುಬ್ಬಳ್ಳಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ನಗರದ ವ್ಯಕ್ತಿಗೆ ಬರೋಬ್ಬರಿ ೩೫.೩೧ ಲಕ್ಷ ರೂಪಾಯಿ ವಂಚಿಸಲಾಗಿದೆ. ನಗರದ ಪ್ರವೀಣಕುಮಾರ ಪತ್ತಾರ ಎಂಬುವರಿಗೆ ವಾಟ್ಸ್ಆ್ಯಪ್ ಸಂದೇಶ ಕಳುಹಿಸಿದ ವ್ಯಕ್ತಿ, ಅವರಿಂದ ೩೫.೩೧ ಲಕ್ಷ ರೂಪಾಯಿ ವರ್ಗಾಯಿಸಿಕೊಂಡು ವಂಚಿಸಿದ್ದಾನೆ. ಈ ಕುರಿತು ಹುಬ್ಬಳ್ಳಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.