ಅದ್ದೂರಿಯಾಗಿ ನಡೆದ ಪುರಾಣ ಪ್ರಸಿದ್ದವಾಗಿರುವ ಶ್ರೀ ಬ್ಯಾಟರಾಯಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಬಂಗಾರಪೇಟೆ ತಾಲೂಕಿನ ದೊಡ್ಡೂರುಕರಪನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬ್ಯಾಟರಾಯಸ್ವಾಮಿ ಬೆಟ್ಟದ ಮೇಲಿರುವ ಶ್ರೀ ಬ್ಯಾಟರಾಯಸ್ವಾಮಿಯ ೮ ದಿನಗಳ ಕಾಲ ನಡೆಯುವ ಜಾತ್ರೆಯ ಅಂಗವಾಗಿ ಶುಕ್ರವಾರ ಅದ್ದೂರಿಯಾಗಿ ರಥೋತ್ಸವ ನಡೆಯಿತು. ರಥೋತ್ಸವಕ್ಕೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಚಾಲನೆ ನೀಡಿ ಮಾತನಾಡಿ, ದೇವರ ಪೂಜಾ ಕಾರ್ಯಗಳಿಗೆ ಬೆಟ್ಟ ಹತ್ತಲು ಒಂದು ಕೋಟಿ ವೆಚ್ಚದಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ ಮಾಡಲಾಗಿದೆ. ಈ ಹಿಂದೆ ಯಾತ್ರಾ ಭವನವನ್ನು ನಿರ್ಮಿಸಲು ಅನುದಾನ ನೀಡಲಾಗಿತ್ತು. ದೇವಾಲಯದಲ್ಲಿ ಬಡ ವರ್ಗದವರು ಮದುವೆ ಇತ್ಯಾದಿ ಶುಭಕಾರ್ಯಗಳನ್ನು