ಬಳ್ಳಾರಿ: ಬಿಜೆಪಿಯ ಕುತಂತ್ರದಿಂದ ಬಿ.ನಾಗೇಂದ್ರರ ಮೇಲೆ ಆರೋಪ ನಗರದಲ್ಲಿ ಶಾಸಕ ನಾರಾ ಭರತ್ ರೆಡ್ಡಿ
ಬಿಜೆಪಿಯವರ ಕುತಂತ್ರದಿಂದ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಅವರು ವಿವಾದಕ್ಕೆ ಸಿಲುಕಿ ಸಚಿವ ಸ್ಥಾನ ಕಳೆದುಕೊಂಡರು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ಅವರು ಸೋಮವಾರ ಮಧ್ಯಾಹ್ನ 2ಗಂಟೆಗೆ ನೆಹರೂ ಕಾಲೋನಿಯ ಮಾಜಿ ಸಚಿವ, ಶಾಸಕ ಬಿ.ನಾಗೇಂದ್ರ ಅವರ ನಿವಾಸದಲ್ಲಿ ನಾಗೇಂದ್ರರ ಜನ್ಮ ದಿನ ನಿಮಿತ್ಯ ಏರ್ಪಡಿಸಿದ್ದ ಗಣಪತಿ-ನವಗ್ರಹ ಹಾಗೂ ಸುದರ್ಶನ ಹೋಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು. ಕೇಂದ್ರದ ಬಿಜೆಪಿಯ ನಾಯಕರು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ನಮ್ಮ ಪಕ್ಷದ ಮುಖಂಡರು ಹಾಗೂ ಶಾಸಕರು ಸಚಿವರನ್ನು ಭಯ ಹುಟ್ಟಿಸುವ ಪ್ರಯತ್ನ ಮಾಡುತ್ತಿದೆ,