ಭಟ್ಕಳ : ವೆಂಕಟಾಪುರದಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಯುವಕರು ಮೃತ ಪಟ್ಟ ಘಟನೆ ನಡೆದಿದೆ.ಚಾಲಕನ ನಿಯಂತ್ರಣ ತಪ್ಪಿದ ಕಾರು ನೇರವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತ ಪಟ್ಟಿದ್ದಾರೆ. ಮೃತರನ್ನು ಭಟ್ಕಳ ಆಜಾದ್ ನಗರ ನಿವಾಸಿ ಮೊಹಮ್ಮದ್ ಅಶ್ರಫ್ ರುಕ್ಷುದ್ದೀನ್ ಶಿಪಾಯಿ ಅವರ ಪುತ್ರರಾದ ಬಿಲಾಲ್ (15) ಮತ್ತು ಆಯಾನ್ (20) ಎಂದು ಗುರುತಿಸಲಾಗಿದೆ.