ಸ್ವರಸಾಮ್ರಾಟ ಪಂ.ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಪಂ.ಬಸವರಾಜ ರಾಜಗುರು ಸ್ಮರಣೆಯಲ್ಲಿ ನವೆಂಬರ್ ೨೨, ೨೩ರ ವರೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಎರಡು ದಿನಗಳ ಕಾಲ ವಚನ ಸಂಗೀತೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ನ ಅಧ್ಯಕ್ಷ ಕೈವಲ್ಯಕುಮಾರ ಗುರವ ಹೇಳಿದರು. ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.