ಹುಬ್ಬಳ್ಳಿ: ಮದುವೆಯಾಗಿ ಮೂರು ವರ್ಷಕ್ಕೆ ಮಾನಸಿಕ ಕಿರುಕುಳಕ್ಕೆ ಮನನೊಂದ ವ್ಯಕ್ತಿಯೊಬ್ಬ ಮನೆಯಲ್ಲಿ ಯಾರು ಇಲ್ಲದಿರುವಾಗ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಘಟನೆ, ಹುಬ್ಬಳ್ಳಿಯ ಸುರಬಿ ನಗರದಲ್ಲಿ ನಡೆದಿದೆ. ವಿರೇಶ ಯಡವಣ್ಣವರ ಸಾವಿಗೆ ಶರಣಾದ ವ್ಯಕ್ತಿ, ಬಿಜಾಪುರ ನಿವಾಸಿ, ಹುಬ್ಬಳ್ಳಿಯ ಸುರಬಿ ನಗರದಲ್ಲಿ ವಾಸವಾಗಿರುತ್ತಾನೆ. ಟಾಟಾ ಪ್ಲೇ ದಲ್ಲಿ ಮಾರ್ಕೆಟಿಂಗ್ ಕೆಲಸ ಮಾಡುತ್ತಿದ್ದ. ಮೂರು ವರ್ಷಗಳ ಹಿಂದೆ ಮದುವೆಯಾಗಿತ್ತು. ಆದ್ರೆ ಯಾವುದೊ ಕಾರಣಕ್ಕೆ ಕೊರಳಿಗೆ ದೀರೆ ಕಟ್ಟಿಕೊಂಡು ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.