ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಕಲಮಂಗಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಪನ್ಯಾಸಕಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಪತಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಸಿಂಧನೂರು ತಾಲ್ಲೂಕಿನ ಕಲಮಂಗಿ ಬಳಿ ಭಾನುವಾರ 5 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ತಾವರಗೇರಾ ಶಶಿಧರ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಅಕ್ಕಮಹಾದೇವಿ (36) ಎಂದು ಗುರುತಿಸಲಾಗಿದೆ. ಹುಲ್ಲು ತುಂಬಿದ್ದ ಟ್ರಾಕ್ಟರ್ಗೆ ಕಾರು ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.