ತೆಂಗಿನಕಾಯಿ ತೆಗೆಯಲು ಮರ ಹತ್ತಿದ್ದ ವ್ಯಕ್ತಿ, ಆಕಸ್ಮಿಕವಾಗಿ ತೆಂಗಿನ ಗರಿಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ, ವಿದ್ಯುತ್ ಶಾಕ್ ಪ್ರವಹಿಸಿ ಮರದಿಂದ ಕೆಳಗೆ ಬಿದ್ದು ಮೃತಪಟ್ಟಘಟನೆ ಅಂಕೋಲಾ ತಾಲೂಕಿನ ಹೊಸಗದ್ದೆಯಲ್ಲಿ ಸಂಭವಿಸಿದೆ. ಈ ಬಗ್ಗೆ ಮಾಧ್ಯಮಕ್ಕೆ ಮಂಗಳವಾರ ಸಂಜೆ 5ಕ್ಕೆ ಪೊಲೀಸ್ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ. ಹೊಸಗದ್ದೆ ನಿವಾಸಿ ರಾಜು ಖೇಮು ಗೌಡ (32) ಮೃತ ವ್ಯಕ್ತಿಯಾಗಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.