ಮಳವಳ್ಳಿ : ತಾಲ್ಲೂಕಿನ ದುಗ್ಗನಹಳ್ಳಿ ಗ್ರಾಮದಲ್ಲಿ ಕ್ರಾಂತಿಕಾರಿ ಪುರುಷ ದಾಸ ಶ್ರೇಷ್ಠ ಭಕ್ತ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು. ಭಾನುವಾರ ಸಾಯಂಕಾಲ 5.30 ರ ಸಮಯದಲ್ಲಿ ಗ್ರಾಮದ ಯುವಕ ಮಿತ್ರರು ಹಾಗೂ ಗ್ರಾಮಸ್ಥರು ಆಯೋಜಿಸಿದ್ದ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮುಖಂಡರು ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕೆಡಿಪಿ ಸದಸ್ಯ ಸಾಹಳ್ಳಿ ಶಶಿರಾಜ್ ಅವರು ಸಮಾಜದಲ್ಲಿನ ಅಸಮಾನತೆ ಜಾತಿ ಯತೆಯನ್ನು ತೊಲಗಿಸಿ ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದ ಮಹಾನ್ ದಾರ್ಶನಿಕ, ಕ್ರಾಂತಿಕಾರಿ ಪುರುಷ, ದಾಸಶ್ರೇಷ್ಠ ಭಕ್ತ ಕನಕದಾಸರ ಚಿಂತನೆ ನಮಗೆಲ್ಲ ಸ್ಪೂರ್ತಿ ಎಂದರು.