ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ರವರು ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಿ.ಎಂ.ಆರ್.ಡಿ.ಎ ಕಛೇರಿಯಲ್ಲಿ ವಿವಿಧ ವಿಭಾಗಗಳ ಇಲಾಖಾ ಮುಖ್ಯಸ್ಥರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬೆಂಗಳೂರು ಕೇಂದ್ರ ನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿ ಮಾಡದ ಸ್ವತ್ತುಗಳ ಪಟ್ಟಿಯನ್ನು ಮಾಡಿ ಅಂತಹ ಸ್ವತ್ತುಗಳಿಗೆ ಬಾಕಿ ಕಂದಾಯ ಪಾವತಿ ಮಾಡಲು ನೋಟಿಸ್ ನೀಡಿ. ನೋಟೀಸ್ ನೀಡಿದ ನಂತರ ಬಾಕಿ ಆಸ್ತಿ ತೆರಿಗೆ ಪಾವತಿ ಮಾಡದಿದ್ದಲ್ಲಿ ಅಂತಹ ಸ್ವತ್ತುಗಳಿಗೆ ಬೀಗ ಹಾಕಲು ಕಂದಾಯ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದರು.