ಶ್ರೀಗಂಧದ ಮರ ಸಾಗಾಣಿಕೆ ಮಾಡುತ್ತಿದ್ದ ಏಳು ಮಂದಿ ಆರೋಪಿಗಳ ಬಂಧನ ಮುಳಬಾಗಿಲು ಕೋಲಾರ ಜಿಲ್ಲೆಯ ಮುಳಬಾಗಿಲು ಶ್ರೀನಿವಾಸಪುರ ಹಾಗೂ ರಾಯಲ್ ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಬಂಧಿತ ಆರೋಪಿಗಳಿಂದ 10 ಲಕ್ಷ ಬೆಲೆಬಾಳುವ 105 ಕೆಜಿ ಶ್ರೀಗಂಧದ ಮರದ ತುಂಡು ಹಾಗೂ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಪೊಲೀಸ್ ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ರವರು ಶನಿವಾರ ಬೆಳಗ್ಗೆ 10 ಗಂಟೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ