ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತ ಕಳ್ಳತನ ನಡೆದಿರುವುದು ಸತ್ಯ. ಹೀಗಾಗಿ ಬಿಜೆಪಿ ಮಾಜಿ ಶಾಸಕ ಗುತ್ತೇದಾರ್ ಅವರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ ಮಾಡುವ ಮೂಲಕ ಮತ ಕಳ್ಳತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸ ಹಾಗೂ ವಿಧಾನಸೌಧದಲ್ಲಿ ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಈ ಪ್ರಕರಣದಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಅಕ್ರಮ ನಡೆದಿರುವುದು ಸತ್ಯ. ಗಂಭೀರವಾದ ತನಿಖೆ ನಡೆಸಿ ಚಾರ್ಜ್ ಶೀಟ್ ಹಾಕಿದ್ದಾರೆ. ಈ ವಿಚಾರದ ಬಗ್ಗೆ ನಮ್ಮ ಶಾಸಕರು ಮಂಗಳವಾರದಂದು ಸದನದಲ್ಲಿ ದನಿ ಎತ್ತಲಿದ್ದಾರೆ. ಇದು ಕೇವಲ ಕರ್ನಾಟಕದ ದನಿಯಲ್ಲ. ಇಡೀ ಭಾರತದ ದನಿ. ಜನರ ಕೃಪೆಯಿಂದ ನಾವು ಇಲ್ಲಿ ಅಧಿಕಾರಕ್ಕೆ ಬಂದಿದ್ದೇವೆ"