ಹುಬ್ಬಳ್ಳಿ: ಬೌದ್ಧ ಧರ್ಮಗುರು ಶ್ರೀ ದಲೈ ಲಾಮಾ ಅವರು ಇಂದು ಬೆಳಿಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ರಾಜ್ಯ ಸರಕಾರದ ಪರವಾಗಿ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸ್ವಾಗತಿಸಿದರು.ಈ ಸಂದರ್ಭದಲ್ಲಿ ಮಹಾನಗರ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್, ಡಿಸಿಪಿ ಮಾನಿಂಗ ನಂದಗಾವಿ, ಲೈಜನ್ ಆಫೀಸರ್ ಆಗಿದ್ದ ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಹುಬ್ಬಳ್ಳಿ ಶಹರ ತಹಶಿಲ್ದಾರ ಮಹೇಶ ಗಸ್ತಿ, ಕಂದಾಯ ನಿರೀಕ್ಷಕ ರವಿ ಬೆನ್ನೂರ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.ನಂತರ ಧರ್ಮಗುರು ಶ್ರೀ ದಲೈ ಲಾಮಾ ಅವರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಟಿಬೇಟಿಯನ್ ಕ್ಯಾಂಪ್ ಗೆ ತೆರಳಿದರು.