ಬುಡಕಟ್ಟು ಜನಾಂಗದ ನಾಯಕ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಭಗವಾನ್ ಬಿರ್ಸಾ ಮುಂಡಾ ಜಯಂತಿ ಕಾರ್ಯಕ್ರಮ ಶನಿವಾರ ನಗರದ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಭಗವಾನ್ ಬಿರ್ಸಾ ಮುಂಡಾ ಅವರ ಭಾವಚಿತ್ರಕ್ಕೆ ಬಿಜೆಪಿ ಮುಖಂಡರು ಪೂಜೆ ಸಲ್ಲಿಸಿ, ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಗರಗ, ಎಸ್ ಟಿ ಮೋರ್ಚಾ ಮುಖಂಡ ಹನುಮಂತಪ್ಪ ಗೌಡರ, ಮಂಡಲ ಅಧ್ಯಕ್ಷ ಶಂಕರ ಶಳಕೆ ಎಂದರು.