ರಾಯಚೂರು ಜಿಲ್ಲೆಯ ಸಣ್ಣ, ಸೂಕ್ಷ್ಮ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡಲು ಹಾಗೂ ಹೊಸ ಉದ್ಯಮಿಶೀಲರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ರಾಯಚೂರು ಜಿಲ್ಲಾ ಕೈಗಾರಿಕಾ ಕೇಂದ್ರ, ರಾಯಚೂರು ಜಿಲ್ಲಾ ಕೃಷಿ ತಾಂತ್ರಿಕ ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಒಂದು ದಿನದ ಇನ್ಕ್ಯೂಬೇಶನ್ ಕಾರ್ಯಗಾರ ನವೆಂಬರ್ 20ರಂದು ನಡೆಯಿತು. ಶುಕ್ರವಾರ 12 ಗಂಟೆಗೆ ನಗರದ ಕೃಷಿ ತಾಂತ್ರಿಕ ಮಹಾ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ನಡೆದ ಕಾರ್ಯಗಾರವನ್ನು ಜಿಲ್ಲಾ ಕೃಷಿ ತಾಂತ್ರಿಕ ಮಹಾ ವಿದ್ಯಾಲಯದ ಕೃಷಿ ತಾಂತ್ರಿಕದ ಡೀನ್ ಡಾ.ಮಲ್ಲಿಕಾರ್ಜುನ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯಮಗಳು ಉಳಿದು ಬೆಳೆಯಲು ಹೊಸ ತಂತ್ರಜ್ಞಾನ ಮತ್ತು ಕೌಶಲ ಅತ್ಯಗತ್ಯ ಎಂದು ಹೇಳಿದರು.