ಹುಬ್ಬಳ್ಳಿ: ಅಧಿಕಾರಕ್ಕಾಗಿ ಸಿದ್ಧರಾಮಯ್ಯನವರು ಏನು ಬೇಕಾದರೂ ಮಾಡಲು ಸಿದ್ಧರಿರುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತೀವ್ರ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದರು. ಹೈಕಮಾಂಡ್ ನಿರ್ದೇಶನ ನೀಡಿದರೂ ಅವರು ತಮ್ಮ ಕುರ್ಚಿಯನ್ನು ಬಿಟ್ಟುಕೊಡುವುದಿಲ್ಲ ಎಂದು ಶೆಟ್ಟರ್ ಸ್ಪಷ್ಟಪಡಿಸಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ಬಿಡಲು ಸಿದ್ಧರಿಲ್ಲ, ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿ ಬಿಟ್ಟುಕೊಡಲು ಒಪ್ಪುತ್ತಿಲ್ಲ. ಈ ಆಂತರಿಕ ಕಚ್ಚಾಟದಿಂದಾಗಿ ಕೊನೆಗೆ ಸರ್ಕಾರ ಪತನವಾಗುವುದು ಖಂಡಿತ ಎಂದು ಜಗದೀಶ ಶೆಟ್ಟರ್ ಭವಿಷ್ಯ ನುಡಿದರು.