ಹಳಿಯಾಳ : ಗಣರಾಜ್ಯೋತ್ಸವದ ಅಂಗವಾಗಿ ಇಂದು ಸೋಮವಾರ ಬೆಳಿಗ್ಗೆ 9:30 ಗಂಟೆ ಸುಮಾರಿಗೆ ಹಳಿಯಾಳ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ಧ್ವಜಾರೋಹಣವನ್ನು ನೆರವೇರಿಸಲಾಯ್ತಿ. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್ ವಿ ದೇಶಪಾಂಡೆ ಅವರು ನಮ್ಮ ಮಹಾನ್ ಸಂವಿಧಾನವನ್ನು ರೂಪಿಸಿ ಜಾರಿಗೆ ತರಲು ಶ್ರಮಿಸಿದ ಎಲ್ಲಾ ಮಹನೀಯರನ್ನು ಸ್ಮರಿಸಿ, ದೇಶದ ಏಕತೆ, ಸಮಗ್ರತೆ ಹಾಗೂ ಪ್ರಗತಿಗಾಗಿ ಬದ್ಧರಾಗಿ ಸ್ವಾತಂತ್ರ್ಯ, ಸಮಾನತೆ ಮತ್ತು ಬಾಂಧವ್ಯ ಎಂಬ ಸಂವಿಧಾನದ ಮೂಲ ಮೌಲ್ಯಗಳನ್ನು ಇನ್ನಷ್ಟು ಬಲಪಡಿಸೋಣ ಎಂದು ಕರೆ ನೀಡಿದರು.