ಮಳವಳ್ಳಿ : ನೆನ್ನೆ ಗುರುವಾರ ಅಂಚೆದೊಡ್ಡಿ ಗ್ರಾಮದ ರೈತ ನಂಜೇಗೌಡ ಸಾಲಭಾದೆಯಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡ ಬೆನ್ನಲ್ಲೇ ಒಂದೇ ರಸ್ತೆಯ ಎದುರಿನಲ್ಲೇ ಇರುವ ಅಂಕನಹಳ್ಳಿ ಗ್ರಾಮದಲ್ಲಿ ಮತ್ತೊಬ್ಬ ರೈತ ಸಾಲ ಭಾದೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. ಈ ಗ್ರಾಮದ ರಾಜಣ್ಣ ಎಂಬುವರ ಮಗನಾದ 44 ವರ್ಷದ ಮಹೇಶ ಎಂಬುವರೇ ಆತ್ಮಹತ್ಯೆಗೆ ಶರಣಾದ ರೈತನಾಗಿದ್ದು ಮೊನ್ನೆ ಬುಧವಾರ ಮನೆಯಲ್ಲಿ ಕ್ರಿಮಿನಾಶಕ ಔಷಧ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಇವರಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಶುಕ್ರ ವಾರ ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ಮೃತಪಟ್ಟರೆಂದು ವರದಿಯಾಗಿದೆ.ಪಟ