ವೀರಶೈವ ಮತ್ತು ಲಿಂಗಾಯತ ಎರಡು ಒಂದೇ ಆಗಿದೆ. ಅನಗತ್ಯ ಗೊಂದಲ ಸೃಷ್ಟಿಸುವುದು ಸರಿಯಲ್ಲ ಶ್ರೀಶೈಲ ಪೀಠದ ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ನಗರದ ಶ್ರೀ ಸರಸ್ವತಿ ನಿಕೇತನ ಸಭಾಂಗಣದಲ್ಲಿ ಯಡೂರು ಶ್ರೀ ವೀರಭದ್ರೇಶ್ವರ ದೇವರ ಭಕ್ತ ಸಮೂಹದ ಸಂಘಟನಾ ಸಭೆಯಲ್ಲಿ ಮಾತನಾಡಿದ ಅವರು, ವೀರಶೈವ ಮತ್ತು ಲಿಂಗಾಯತರು ಒಂದಾಗಿ ಸಂಘಟನಾತ್ಮಕವಾಗಿ ಕೆಲಸ ಮಾಡಬೇಕು ಎಂದರು.