ಬೆಂಗಳೂರು ಉತ್ತರ: ಚುನಾವಣಾ ರಾಜ್ಯಗಳಿಗೆ ಮೊದಲ ಸ್ಥಾನ, ಕರ್ನಾಟಕಕ್ಕೆ ಸೈಡ್ ಲೈನ್: ನಗರದಲ್ಲಿ ಪ್ರದೀಪ್ ಈಶ್ವರ್ ಆಕ್ರೋಶ
ಶಾಸಕ ಪ್ರದೀಪ್ ಈಶ್ವರ್ ಅವರು ದೆಹಲಿಯ ಗಣರಾಜ್ಯೋತ್ಸವ ಫರೇಡ್ ನಲ್ಲಿ ರಾಜ್ಯದ ಟ್ಯಾಬ್ಲೋ ಸೈಡ್ ಲೈನ್ ಮಾಡುವ ವಿಚಾರಕ್ಕೆ ಸಂಬಂಧಿಸಿ ಸದಾಶಿವನಗರದ ಬಳಿ ಶನಿವಾರ ಮಧ್ಯಾಹ್ನ 2:30 ರ ಸುಮಾರಿಗೆ ಮಾಧ್ಯಮಗಳ ಜೊತೆ ಮಾತನಾಡಿ, ಕರ್ನಾಟಕದ ಪ್ರತಿಯೊಬ್ಬ ಮತದಾರ ಸೂಕ್ಷ್ಮವಾಗಿ ಯೋಚಿಸಬೇಕು. ಬಿಜೆಪಿಗೆ ಮತ ಹಾಕಿದವರು ಯೋಚನೆ ಮಾಡಿ, ನಾಲಾಯಕ್ ಸಂಸದರು ನೋಡಬೇಕಿದೆ. ರಾಜ್ಯದ ಪರ ಧ್ವನಿ ಎತ್ತದ ಬಿಜೆಪಿ ಸಂಸದರು ನೋಡಿ. ಜನವರಿ 26 ರಂದು ರಿಪಬ್ಲಿಕ್ ಡೇ ನಡೆಯುತ್ತೆ. 30 ಟ್ಯಾಬ್ಲೋಗಳಿಗೆ ಅವಕಾಶ ನೀಡಲಾಗಿದೆ. 17 ಟ್ಯಾಬ್ಲೋ ಕರ್ತವ್ಯ ಪಥದಲ್ಲಿ ಹೋಗುತ್ವೆ. ಕೇರಳದ ಟ್ಯಾಬ್ಲೋ ಹೋಗ್ತಿದೆ ಚುನಾವಣೆ ಇದೆ. ತಮಿಳುನಾಡಿನಲ್ಲಿ ಚುನಾವಣೆ ಇದೆ ಹೋಗ್ತಿದೆ. ಪುದುಚೇರಿಯಲ್ಲು ಚುನಾವಣೆ ಇದೆ ಹೋಗ್ತಿದೆ.