ಮೊಳಕಾಲ್ಮುರು:-ಜನವರಿ 26 ರಂದು ಜ್ಯೂನಿಯರ್ ಕಾಲೇಜು ಆವರಣದ ಹಿಂಭಾಗದಲ್ಲಿ ನಡೆಸಲು ಉದ್ದೇಶಿಸಿರುವ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಗರ್ಭಿತವಾಗಿ ಆಚರಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಸಹಕರಿಸಬೇಕು ಎಂದು ತಹಸೀಲ್ದಾರ್ ಟಿ.ಜಗದೀಶ್ ತಿಳಿಸಿದರು. ಪಟ್ಟಣದ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ರಾಜ್ಯೋತ್ಸವ ಕಾರ್ಯಕ್ರಮವು ರಾಷ್ಟ್ರದ ಹಬ್ಬವಾಗಿದ್ದು, ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಖಡ್ಡಾಯವಾಗಿ ಹಾಜರಿರಬೇಕು ಎಂದರು.