ಜಿಲ್ಲೆಯಲ್ಲಿ ಯಾರೊಬ್ಬರು ಸಹ ವಿದ್ಯಾಭ್ಯಾಸದಿಂದ ಹೊರಗಿರಬಾರದು ಕೋಲಾರ: ಜಿಲ್ಲೆಯಲ್ಲಿ ಯಾವುದೇ ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿಯಬಾರದು. ವಿವಿಧ ಕಾರಣಗಳಿಂದ ಶಾಲೆಗಳಿಗೆ ಹೋಗದೆ ಕೆಲಸಕ್ಕೆ ಹೋಗುತ್ತಿರುವ ಮಕ್ಕಳನ್ನು ಪತ್ತೆ ಹಚ್ಚಿ ಅವರನ್ನು ಶಾಲೆಗೆ ಸೇರಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿ.ಇ.ಓ) ಪ್ರವೀಣ್ ಪಿ ಬಾಗೇವಾಡಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಇಂದು ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ನಡೆದ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಶಿಕ್ಷಣದಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರಿಸಿ: