ಗದಗ: ನಗರದಲ್ಲಿ ನರೇಗಾ ಹೊರಗುತ್ತಿಗೆ ಸಿಬ್ಬಂದಿ 5 ತಿಂಗಳ ಸಂಬಳ ಬಿಡುಗಡೆ ಮಾಡಲು ಆಗ್ರಹ#localissue
Gadag, Gadag | May 29, 2025 ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ನೂರಾರು ಹೊರಗುತ್ತಿಗೆ ನೌಕರರು ಮತ್ತು ಗ್ರಾಮ ಕಾಯಕ ಮಿತ್ರರರಿಗೆ ಕಳೆದ 5 ತಿಂಗಳಿಂದ ವೇತನ ಆಗ್ರಹಿಸಿ ನೂರಾರು ಸಿಬ್ಬಂದಿಗಳು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮೀಣಾಭಿವೃದ್ಧಿಯಲ್ಲಿ ಉದ್ಯೋಗ ಖಾತರಿ ಯೋಜನೆ ಮಹತ್ತರ ಪಾತ್ರ ವಹಿಸಿದೆ. ಕೂಲಿಕಾರರಿಗೆ ನರೇಗಾ ಕೆಲಸ ಕೊಡಿಸುವುದು, ಯೋಜನೆಯಡಿ ಹಳ್ಳಿಗಳಲ್ಲಿ ಆಸ್ತಿ ಸೃಜನೆಗಳಲ್ಲಿ ನರೇಗಾ ನೌಕರರ ಪಾತ್ರ ಬಹುಮುಖ್ಯವಾಗಿದೆ. ಆದರೆ, ನೌಕರರಿಗೆ ಪ್ರತಿ ತಿಂಗಳು ವೇತನ ಸರಿಯಾಗಿ ಆಗದೆ ತುಂಬಾ ಸಮಸ್ಯೆಯಾಗಿದೆ ಕೂಡಲೇ ಬಾಕಿ ಇರುವ ಸಂಬಳವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.