ಉಡುಪಿ: ಸಿದ್ದರಾಮಯ್ಯ ಪರಿಜ್ಞಾನ ಇಲ್ಲದಂತೆ ಮಾತನಾಡುತ್ತಿರುವುದು ದುರದೃಷ್ಟಕರ: ನಗರದಲ್ಲಿ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್
Udupi, Udupi | Mar 9, 2024 ಸಿಎಂ ಸಿದ್ದರಾಮಯ್ಯ ಪರಿಜ್ಞಾನ ಇಲ್ಲದಂತೆ ಮಾತನಾಡುತ್ತಿರುವುದು ದುರದೃಷ್ಟಕರ ಎಂದು ನಗರದಲ್ಲಿ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರು ಆಕ್ರೋಶ ವ್ಯಕ್ತಪಡಿಸಿದರು. ಉಡುಪಿ ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ಯಾವುದೇ ಸಹಕಾರ ನೀಡುತ್ತಿಲ್ಲ, ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣ ನೀಡುತ್ತಿಲ್ಲ ಎನ್ನುವ ಆರೋಪಗಳನ್ನು ಹೊರಿಸಿ ಜನರ ದಿಕ್ಕು ತಪ್ಪಿಸುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ, 15 ಬಜೆಟ್ ಮಂಡಿಸಿರುವ ಸಿದ್ದರಾಮಯ್ಯನವರು ಪರಿಜ್ಞಾನ ಇಲ್ಲದಂತೆ ಮಾತನಾಡುತ್ತಿರುವುದು ದುರದೃಷ್ಟಕರ ಎಂದು ವಿಧಾನಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಹೇಳಿದರು.