ಬೆಂಗಳೂರು ಉತ್ತರ: ನಗರತ್ ಪೇಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಸ್ಥಳಕ್ಕೆ ಪೊಲೀಸ್ ಕಮಿಷನರ್ ಭೇಟಿ
ನಗರತ್ ಪೇಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿದ್ದಾರೆ. ಆಗಸ್ಟ್ 16ರಂದು ನಾಲ್ಕಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ ಸ್ಥಳಕ್ಕೆ ಬೆಳಿಗ್ಗೆ 11:30ಕ್ಕೆ ಭೇಟಿ ನೀಡಿದ ಅವರು ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ''ಗ್ರೌಂಡ್ ಫ್ಲೋರ್ನಲ್ಲಿರುವ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಇಡೀ ಕಟ್ಟಡಕ್ಕೆ ಆವರಿಸಿದೆ. ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಒಳಗೆ ಸಿಲುಕಿರುವವರು ಮೃತಪಟ್ಟಿರುವ ಶಂಕೆಯಿದೆ. ದಟ್ಟ ಹೊಗೆಯಿಂದಾಗಿ ಕಾರ್ಯಾಚರಣೆ ವಿಳಂಬವಾಗುತ್ತಿದೆ.ಕಾರ್ಯಾಚರಣೆ ಮುಂದುವರೆಸಲಾಗಿದೆ" ಎಂದಿದ್ದಾರೆ