ಕಾರವಾರ : ಪೊಲೀಸ್ ಇಲಾಖೆಯ ಆಶ್ರಯದಲ್ಲಿ ಕಾರವಾರ ನಗರದ ಮಹಿಳಾ ಪೊಲೀಸ್ ಠಾಣೆ ಹಾಗೂ ಅಕ್ಕಪಡೆಯ ವತಿಯಿಂದ ಮಾಜಾಳಿಯ ದೇವರಾಜು ಅರಸು ಹಿಂದುಳಿದ ವರ್ಗಗಳ ಹೆಣ್ಣು ಮಕ್ಕಳ ವಸತಿ ನಿಲಯದಲ್ಲಿ ಅಪರಾಧ ತಡೆ ಜಾಗೃತಿ ಕಾರ್ಯಕ್ರಮವನ್ನು ಭಾನುವಾರ ಸಂಜೆ 6:30 ಗಂಟೆ ಸುಮಾರಿಗೆ ಹಮ್ಮಿಕೊಳ್ಳಲಾಯಿತು. ಈ ಜಾಗೃತಿ ಕಾರ್ಯಕ್ರಮದಲ್ಲಿ ಕಾರವಾರ ಮಹಿಳಾ ಪೊಲೀಸ್ ಠಾಣೆಯ ಹಾಗೂ ಅಕ್ಕಪಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಅಪರಾಧ ತಡೆ ಜಾಗೃತಿಯನ್ನು ಮೂಡಿಸಿ, ವಿದ್ಯಾರ್ಥಿಗಳು ಸಭ್ಯ ನಡವಳಿಕೆಗಳ ಮೂಲಕ ಉತ್ತಮ ಸಂಸ್ಕೃತಿ ಮತ್ತು ಸಂಸ್ಕಾರಗಳನ್ನು ಮೈಗೂಡಿಸಿಕೊಂಡು ಭವಿಷ್ಯದಲ್ಲಿ ಈ ರಾಷ್ಟ್ರದ ಆದರ್ಶ ನಾಗರಿಕರಾಗಬೇಕೆಂದು ಕರೆ ನೀಡಿದರು.