ಬೆಂಗಳೂರು ದಕ್ಷಿಣ: ಮಾರೇನಹಳ್ಳಿಯಲ್ಲಿ ಶಾಸಕರ ಸಮ್ಮುಖದಲ್ಲಿ ಜನಸ್ಪಂದನಾ ಕಾರ್ಯಕ್ರಮ, ಸಾರ್ವಜನಿಕರ ಕುಂದು ಕೊರತೆಗಳ ಬಗೆಹರಿಸಲು ಅಧಿಕಾರಿಗಳಿಂದ ಅಹವಾಲು ಸ್ವೀಕಾರ
ಯಶವಂತಪುರ ವಿಧಾನಸಭಾ ಕ್ಷೇತ್ರದ ಚೋಳನಾಯಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರಿನಹಳ್ಳಿ ಗ್ರಾಮದಲ್ಲಿ ತಾಲೂಕು ಆಡಳಿತದ ವತಿಯಿಂದ ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಸಕ ಸೋಮಶೇಖರ್ ಜನಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸರ್ಕಾರದ ವಿವಿಧ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಚರ್ಚೆ ನಡೆಸಿ ಅಹವಾಲು ಸ್ವೀಕರಿಸಿದರು. ಜೊತೆಗೆ ಫಲಾನುಭವಿಗಳಿಗೆ ಶಾಸಕರ ಸಮ್ಮುಖದಲ್ಲಿ ಸವಲತ್ತುಗಳ ಮಂಜೂರಾತಿ ಪತ್ರ ವಿತರಿಸಲಾಯಿತು.