ಯಲ್ಲಾಪುರ: ಹಿಂದಿನ ಬಿಜೆಪಿ ಸರಕಾರದ ಯೋಜನೆಯಾದ ಪಟ್ಟಣದ ಹೆಬ್ಬಾರ ನಗರದಲ್ಲಿ ನಿರ್ಮಿಸಲಾಗಿರುವ ಜಿ +2 ವಸತಿಗೃಹಗಳನ್ನು ಕೂಡಲೇ ಫಲಾನುಭವಿಗಳಿಗೆ ಹಸ್ತಂತರಿಸುವಂತೆ ಆಗ್ರಹಿಸಿ ಬಿಜೆಪಿ ಮಂಡಲದ ನೇತೃತ್ವದಲ್ಲಿ ಡಿ. 23ರಂದು ಬೆಳಗ್ಗೆ 10.30ಕ್ಕೆ ಪಟ್ಟಣ ಪಂಚಾಯಿತಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ ಹೇಳಿದರು.ಜಿ ಪಂ ಮಾಜಿ ಸದಸ್ಯರಾದ ಉಮೇಶ್ ಭಾಗ್ವತ್,ರಾಘವೇಂದ್ರ ಭಟ್,ಇತರರು ಇದ್ದರು.