ಯಲ್ಲಾಪುರ: ಕಿರವತ್ತಿಯಲ್ಲಿ ಜ.12ರಂದು ಸಂವಿಧಾನ ಸಂರಕ್ಷಣೆ,ಅರಿವು ಜಾಗೃತಿ ಸಮಾವೇಶ,ಯುವ ಕರ್ನಾಟಕ ರಕ್ಷಣಾವೇದಿಕೆ ಅಧ್ಯಕ್ಷ ಅರ್ಜುನ ಮಾಹಿತಿ
ಯಲ್ಲಾಪುರ : ಜ. 12 ರಂದು ತಾಲೂಕಿನ ಕಿರವತ್ತಿಯಲ್ಲಿ ಯುವ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಸಂವಿಧಾನ ಸಂರಕ್ಷಣೆ ಮತ್ತು ಅರಿವು ಜಾಗೃತಿಯ ಕುರಿತು ಜಿಲ್ಲಾ ಮಟ್ಟದ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಅರ್ಜುನ್ ಬೆಂಗೇರಿ ಹೇಳಿದರು. ಮಂಗಳವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾರ್ವಜನಿಕ ವಲಯದಲ್ಲಿ ನಡೆಯುತ್ತಿರುವ ಸಂವಿಧಾನ ವಿರೋಧಿ ಚಟುವಟಿಕೆಗಳ ಕುರಿತು ಜಾಗೃತಿ ಮೂಡಿಸುವ ಕುರಿತು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದುತಿಳಿಸಿದರು.