ಹುಬ್ಬಳ್ಳಿ: ಹುಧಾ ಮಹಾನಗರ ಪಾಲಿಕೆಯ ವೈದ್ಯಾಧಿಕಾರಿ ಹುದ್ದೆಯನ್ನು ಸರಕಾರ ರದ್ದುಪಡಿಸಿರುವುದನ್ನು ಖಂಡಿಸಿ ದಲಿತ ವಿಮೋಚನಾ ಸಮಿತಿಯಿಂದ ಅನಾರೋಗ್ಯದ ತೊಂದರೆಯ ಅಣಕು ಪ್ರದರ್ಶನದ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು.ನಗರದ ಪಾಲಿಕೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ದಲಿತ ವಿಮೋಚನಾ ಸಮಿತಿಯ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಹಾನಗರದ ಪಾಲಿಕೆ ಚಿಟಗುಪ್ಪಿ ಆಸ್ಪತ್ರೆ ಹುಬ್ಬಳ್ಳಿ ನಗರದ ಬಡ ಜನರಿಗೆ ಸಂಜೀವಿನಿಯಾಗಿದೆ. ಚಿಟಗುಪ್ಪಿ ಆಸ್ಪತ್ರೆಗೆ ದಿನ ನಿತ್ಯ ಬಡವರು ಸಾವಿರಾರು ಸಂಖ್ಯೆಯಲ್ಲಿ ಚಿಕಿತ್ಸೆ ಪಡೆಯಲು ಬರುತ್ತಾರೆ. ವಿಶೇಷವಾಗಿ ಕೆಲವೊಂದು ಶಸ್ತ್ರ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಯನ್ನೇ ಜನರು ಅವಲಂಬಿಸಿದ್ದು, ಈ ನಿಟ್ಟಿನಲ್ಲಿ ವೈದ್ಯಾಧಿಕಾರಿ ಹುದ್ದೆ ರದ್ದು ಮಾಡಿ