ಯಲ್ಲಾಪುರ: ತಾಲೂಕಿನ ಹುತ್ಕಂಡ ಕ್ರಾಸ್ ನಲ್ಲಿ ಬಸ್ ನಿಲುಗಡೆಗೆ ಆಗ್ರಹಿಸಿ ಗ್ರಾಮಸ್ಥ ರಿಂದ ಮನವಿ ಸಲ್ಲಿಕೆ
ನ್ಯೂಸ್ ಯಲ್ಲಾಪುರ: ಯಲ್ಲಾಪುರ ತಾಲೂಕಿನ ಹುತ್ಕಂಡ ಕ್ರಾಸ್ ನಲ್ಲಿ ಬಸ್ ನಿಲುಗಡೆಗೆ ಆಗ್ರಹಿಸಿ ಗ್ರಾಮಸ್ಥರು ಗ್ರಾಮ ಪಂಚಾಯತ ಸದಸ್ಯ ಆರ್.ಎಸ್.ಭಟ್ಟ ನೇತೃತ್ವದಲ್ಲಿ ವಾ.ಕ.ರಾ.ರ.ಸಾ ಸಂಸ್ಥೆಯ ಘಟಕ ವ್ಯವಸ್ಥಾಪಕರಿಗೆ ಮಂಗಳವಾರ ಮನವಿ ಸಲ್ಲಿಸಿದರು. ಯಲ್ಲಾಪುರ-ಶಿರಸಿ ಮಾರ್ಗದ ಹುತ್ಕಂಡ ಕ್ರಾಸ್ ನಲ್ಲಿ ಬಸ್ ನಿಲುಗಡೆ ಮಾಡದೇ ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಬೆಳಿಗ್ಗೆ ಸಮಯಕ್ಕೆ ಸರಿಯಾಗಿ ಶಾಲೆ-ಕಾಲೇಜು ತಲುಪಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆ ಬಗ್ಗೆ ಹಲವು ಬಾರಿ ಸಂಬಂದಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಈ ವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಮನವಿ ಯಲ್ಲಿ ತಿಳಿಸಿದ್ದಾರೆ