ಧಾರವಾಡ: ಹುಧಾ ಪಾಲಿಕೆಯಿಂದ ಅ.31 ಹಾಗೂ ನ.1 ರಂದು ಕರ್ನಾಟಕ ರಾಜ್ಯೋತ್ಸವ: ನಗರದಲ್ಲಿ ಹುಧಾ ಪಾಲಿಕೆ ಮಹಾಪೌರ ಜ್ಯೋತಿ ಪಾಟೀಲ
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಅಕ್ಟೋಬರ್ 31 ಮತ್ತು ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮೇಯರ್ ಜ್ಯೋತಿ ಪಾಟೀಲ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅ. 31ರಂದು ಧಾರವಾಡದಲ್ಲಿ ಮಧ್ಯಾಹ್ನ 3.30ಕ್ಕೆ ತಾಯಿ ಭುವನೇಶ್ವರಿ ಮಾತೆಯ ಭವ್ಯ ಮೆರವಣಿಗೆ ಜರುಗುವುದು. ಸಂಜೆ 5 ಗಂಟೆಗೆ ಕಲಾಭವನ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗುವುದು.