ಕಾಳಗಿ: ಕಾಳಗಿ ಹಾಗೂ ರಟಕಲ್ನಲ್ಲಿ ಶಾಸಕ ಡಾ.ಅವಿನಾಶ್ ಜಾಧವ ಹಿಂಗಾರು ಬೀಜ ವಿತರಣೆ
ಕಾಳಗಿ ರೈತ ಸಂಪರ್ಕ ಕೇಂದ್ರದ ವತಿಯಿಂದ ಕಾಳಗಿಯಲ್ಲಿ ಹಾಗೂ ಕೊಡ್ಲಿ ರೈತ ಸಂಪರ್ಕ ಕೇಂದ್ರದ ವತಿಯಿಂದ ರಟಕಲ್ ವೀರಕ್ತ ಮಠದಲ್ಲಿ ರೈತರಿಗೆ ಹಿಂಗಾರು ಬಿತ್ತನೆಯ ಬೀಜ ವಿತರಣೆ ಕಾರ್ಯಕ್ರಮಗಳು ನೆರವೇರಿದವು. ಈ ಸಂದರ್ಭದಲ್ಲಿ ಶಾಸಕ ಡಾ. ಅವಿನಾಶ್ ಜಾಧವ ಅವರು ಭಾಗವಹಿಸಿ ಮಾತನಾಡಿದರು. ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳೊಂದಿಗೆ ಸಂಪರ್ಕಿಸಿ ಅವರ ಮಾರ್ಗದರ್ಶನ ಪಡೆದು ಸುಧಾರಿತ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವಂತೆ ರೈತರಿಗೆ ಮನವಿ ಮಾಡಿ ಬಿಜ ವಿತರಣೆ ಮಾಡಿದರು. ಈ ಕಾರ್ಯಕ್ರಮದಲ್ಲಿ ರಟಕಲನ ಪೂಜ್ಯರು, ಸ್ಥಳೀಯ ಮುಖಂಡರು, ರೈತರು ಹಾಗೂ ಕೃಷಿ ಅಧಿಕಾರಿಗಳು ಉಪಸ್ಥಿತರಿದ್ದರು ಎಂದು ಸೋಮವಾರ 8 ಗಂಟೆಗೆ ಮಾಹಿತಿ ಲಭ್ಯವಾಗಿದೆ.