ಜಾನುವಾರುಗಳಿಗೆ ಕಾಲು ಬಾಯಿ ಜ್ವರ ರೋಗದ ಲಸಿಕೆ ತಪ್ಪದೇ ಹಾಕಿಸಬೇಕು ಜಿಲ್ಲೆಯ ಎಲ್ಲಾ ಪಶುಪಾಲಕರು ತಮ್ಮ ಜಾನುವಾರುಗಳಿಗೆ ತಪ್ಪದೇ ೮ನೇ ಸುತ್ತಿನ ಕಾಲು ಬಾಯಿ ಜ್ವರ ರೋಗದ ಲಸಿಕೆ ಹಾಕಿಸಬೇಕು ಬೇಕೆಂದು ರೈತರಲ್ಲಿ ಮನವಿ ಮಾಡಿದರು . ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮದ ಜಿಲ್ಲಾ ನಿರ್ವಹಣಾ ಸಮಿತಿಯ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ೩ನೇ ನವೆಂಬರ್ ನಿಂದ ೨ನೇ ಡಿಸಂಬರ್ ವರೆಗೆ ಹಮ್ಮಿಕೊಂಡಿರುವ ಲಸಿಕಾ ಆಭಿಯಾನ ದಲ್ಲಿ ತಪ್ಪದೇ ಪಾಲ್ಗೋಂಡು ತಮ್ಮ ಜಾನುವರು ಗಳಿಗೆ ಲಸಿಕೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರವಿ ತಿಳಿಸಿದರು.