ಪ್ರಧಾನ ಮಂತ್ರಿಗಳ ವಿಶ್ವಕರ್ಮ ಯೋಜನೆಯಡಿ ಫಲಾನುಭವಿಗಳಿಗೆ ಟೂಲ್ ಕಿಟ್ಗಳ ವಿತರಣೆ ಪ್ರಧಾನ ಮಂತ್ರಿಗಳ ವಿಶ್ವಕರ್ಮ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಟೂಲ್ ಕಿಟ್ಗಳ ವಿತರಣಾ ಕಾರ್ಯಕ್ರಮವನ್ನು ಕೋಲಾರ ನಗರದ ವಿಭಾಗೀಯ ಅಂಚೆ ಕಛೇರಿಯಲ್ಲಿ ಮಾನ್ಯ ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಂ ಮಲ್ಲೇಶ್ ಬಾಬು ರವರ ಅಧ್ಯಕ್ಷತೆಯಲ್ಲಿ ಮಂಗಳವಾರ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಟೂಲ್ ಕಿಟ್ಟುಗಳನ್ನು ವಿತರಿಸಿ ಇವುಗಳ ಸದುಪಯೋಗ ಪಡೆದುಕೊಳ್ಳುವಂತೆ ಮಾನ್ಯ ಸಂಸದರು ಕೋರಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಇಂಚರ ಗೋವಿಂದರಾಜು, ಓಂ ಶಕ್ತಿ ಚಲಪತಿ, ಸಮಾಜ ಸೇವಕ ಸಿ ಎಂ ಆರ್ ಶ್ರೀನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದ