ಧಾರವಾಡ ಕಡಪಾ ಮೈದಾನದಲ್ಲಿ ನಿರ್ಮಿಸಿರುವ ಡಾ. ಮಲ್ಲಿಕಾರ್ಜುನ ಮನ್ಸೂರ್ ಕಲಾ ಭವನವನ್ನು ವರ್ಷಗಟ್ಟಲೇ ಪಾಳುಗೆಡವಿರುವುನ್ನು ಖಂಡಿಸಿ ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು. ಉತ್ತರ ಕರ್ನಾಟಕ ಭಾಗದ ಕಲೆ ಸಂಸ್ಕೃತಿ ಕಾಪಾಡಲು ಹಾಗೂ ಕಲಾವಿದರು ಅನುಕೂಲವಾಗುವಂತೆ ಈ ಕಲಾಭವನದ ಅಭಿವೃದ್ಧಿ ಪಡಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು