ರಾಯಚೂರು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಬೆಳೆನಷ್ಟ ಪರಿಹಾರ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪ್ರತಿ ಎಕರೆಗೆ ರೂ. 25000 ಬೆಳೆ ಪರಿಹಾರ ಮತ್ತು ಬೆಳೆ ವಿಮೆ ವಿತರಿಸಬೇಕು, ಸಿಸಿಐ ಹತ್ತಿ ಬೆಳೆದ ರೈತರಿಗೆ ಆನ್ ಲೈನ್ ಬುಕಿಂಗ್ಗಳನ್ನು ಎಲ್ಲಾ ತಾಲೂಕ ಕೇಂದ್ರ ಕಛೇರಿಗಳು ತೆಗೆಯಬೇಕು, ಎಲ್ಲಾ ಬೆಳೆಗಳ ಬೆಂಬಲ ಬೆಲೆಯನ್ನು ನಿಗದಿ ಪಡಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಳೆಯಿಂದ ಬೆಳೆ ನಷ್ಟ ಪರಿಹಾರ ನೀಡದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಹಾಕಿದರು.