ಶಿವಮೊಗ್ಗ: ಭದ್ರಾವತಿಯಲ್ಲಿ ಬೀದಿ ನಾಯಿಗಳ ಹಾವಳಿ ತಡೆಗೆ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್ ಗೌಡ ಆಗ್ರಹ
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಎಲ್ಲೆಂದರಲ್ಲಿ ಹಿಂಡೂ ಹಿಂಡಾಗಿ ಓಡಾಡುತ್ತ ಒಂಟಿಯಾಗಿ ಓಡಾಡುವರ ಮೇಲೆ ದಾಳಿ ಮಾಡುತ್ತಿವೆ. ಕೂಡಲೇ ನಗರ ಸಭೆ ಆರೋಗ್ಯ ಇಲಾಖೆ ಹಾಗೂ ತಾಲೂಕು ಆಡಳಿತ ಈ ಬಗ್ಗೆ ಕ್ರಮ ಕೈಗೊಂಡು ನಾಯಿಗಳ ಹಾವಳಿ ತಡೆಯಲು ಸಂತಾನ ಹರಣ ನಡೆಸಿ ಹಾವಳಿ ತಪ್ಪಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್ ಗೌಡ ಅವರು ಭಾನುವಾರ ಸಂಬಂಧ ಪಟ್ಟ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.