ದೇವದುರ್ಗ: ಒಳ ಮೀಸಲಾತಿ ಜಾರಿಗೊಳಿಸದಿದ್ದರೆ ರಕ್ತಪಾತದ ಹೋರಾಟ: ಪಟ್ಟಣದಲ್ಲಿ ಕೂಲಿ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಯಲ್ಲಪ್ಪ ಆಲ್ದರ್ತಿ
ರಾಜ್ಯದಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸುವಂತೆ ಅನೇಕ ಬಾರಿ ಮನವಿ ಸಲ್ಲಿಸಿದರು ಸರ್ಕಾರ ಕಡೆಗಣಿಸುತ್ತಿದ್ದು ಒಳ ಮೀಸಲಾತಿಗಾಗಿ ನಾವು ರಕ್ತಪಾತದ ಹೋರಾಟವನ್ನು ನಡೆಸಲು ಸಿದ್ಧರಾಗಿದ್ದೇವೆ ಎಂದು ಕೂಲಿ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಯಲ್ಲಪ್ಪ ಆಲ್ದರ್ತಿ ಹೇಳಿಕೆ ನೀಡಿದ್ದಾರೆ. ಈ ಕುರಿತು ದೇವದುರ್ಗ ಪಟ್ಟಣದಲ್ಲಿ ಗುರುವಾರ ರಾತ್ರಿ ಮಾತನಾಡಿ, ಆಗಸ್ಟ್ ಒಂದನೇ ತಾರೀಖಿನಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಆರಂಭಗೊಳ್ಳುತ್ತಿದ್ದು ಎಲ್ಲ ಮಾದಿಗ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.