ಶಿವಮೊಗ್ಗ: ನಗರದಲ್ಲಿ ನೂತನ ಗೋ ಶೆಡ್ಗಳ ಉದ್ಘಾಟನೆ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಭಾಗಿ
ಶಿವಮೊಗ್ಗ ನಗರದ ಮಹಾವೀರ ಗೋಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗೋ ಶೆಡ್ ಗಳ ಉದ್ಘಾಟನಾ ಕಾರ್ಯಕ್ರಮವನ್ನು ಭಾನುವಾರ ಆಯೋಜಿಸಲಾಗಿತ್ತು. ಗೋ ಶೆಡ್ ಗಳನ್ನು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು ಗೋ ಪೂಜೆ ಸಲ್ಲಿಸಿ ಬಳಿಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೆ ಎಸ್ ಈಶ್ವರಪ್ಪ ಅವರ ಪುತ್ರ ಕೆ.ಇ.ಕಾಂತೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು